25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ‘ವೇದ ರತ್ನ’ ಪ್ರಶಸ್ತಿ ಗೆ ಆಯ್ಕೆಯಾಗಿರುತ್ತಾರೆ.

ಡಿ 27 ರಿಂದ 29 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿರುವುದು.

ಇವರು ಕಳೆದ 40 ವರ್ಷಗಳಿಂದ ವೈದಿಕ ಪೌರೋಹಿತ್ಯ ವೃತ್ತಿಯಲ್ಲಿದ್ದು,.ವೇದಬ್ರಹ್ಮ ಪಳ್ಳತ್ತಡ್ಕ ವಿಶ್ವೇಶ್ವರ ಭಟ್
ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ವೇದಮೂರ್ತಿ ಕೇಶವ ಜೋಯಿಶ್ ಕರುವಜೆ ಇವರ ಶಿಷ್ಯ.

ಏಳು ವರ್ಷಗಳ ಕಾಲ ವರದಹಳ್ಳಿ ಶ್ರೀಧರಾಶ್ರಮದಲ್ಲಿ ಸಂಪೂರ್ಣ ಕೃಷ್ಣ ಪೌರೋಹಿತ್ಯದ ಜೊತೆಗೆ ಅನೇಕ ಶಿಷ್ಯರನ್ನು ತಯಾರು ಮಾಡಿ ಸಮಾಜಕ್ಕೆ ಕೊಡುಗೆಯನ್ನಾಗಿ ನೀಡಿರುತ್ತಾರೆ.

ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮಣಿಪುರ ಅಲ್ಲದೇ ವಿದೇಶಗಳಾದ ಮಸ್ಕತ್ ಮತ್ತು ಶ್ರೀಲಂಕಾದಲ್ಲೂ ಪೌರೋಹಿತ್ಯದ ನೇತೃತ್ವ ವಹಿಸಿಕೊಂಡಿರುವುದು ಇವರ ವಿಶೇಷತೆ. ಮತ್ತು ಇವರ ಮಗ ಈಶ್ವರ ಶರ್ಮ, ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya
error: Content is protected !!