24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya
error: Content is protected !!