23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!