30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

ಕನ್ಯಾಡಿ ll : ಹಳೇ ವಿದ್ಯಾರ್ಥಿ ಸಂಘ ಕನ್ಯಾಡಿ 2 ಇವರ ಸಂಯುಕ್ತ ಆಶ್ರಯದಲ್ಲಿ 2024 -25 ನೇ ಸಾಲಿನ ಪ್ರತಿಭಾ ಕಲೋತ್ಸವವು ಡಿ.13 ರಂದು ಶಾಲಾ ಧ್ವಜಾರೋಹಣದಿಂದ ಪ್ರಾರಂಭವಾಯಿತು.

ಧ್ವಜಾರೋಹಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆಯ ದೈಹಿಕ ಶಿಕ್ಷಣ ಶಿಕ್ಷಕ ಮರಿಯಪ್ಪ ಗೌಡ ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟಕರಾದ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಪರಮೇಶ್ವರ್ ನೂತನವಾಗಿ ನಿರ್ಮಿಸಿದ ಹೆಣ್ಣು ಮಕ್ಕಳ ಶೌಚಾಲಯವನ್ನು ಉದ್ಘಾಟಿಸಿದರು. ಸತ್ಯಪ್ರಿಯ ಕಲ್ಲೂರಾಯ ಪ್ರಧಾನ ಅರ್ಚಕರು ಸೌತಡ್ಕ ದೇವಸ್ಥಾನ ಇವರು 2024 -25 ನೇ ಸಾಲಿನ ದಾನಿಗಳ ಶಾಶ್ವತ ಫಲಕವನ್ನು ಅನಾವರಣಗೊಳಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ, ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಪರಮೇಶ್ವರ್ ನೇತೃತ್ವದಲ್ಲಿ ನಡೆಯಿತು. ಶಾಲೆ ಕುರಿತಾದ ಸಂಪೂರ್ಣವಾದ ವರದಿಯನ್ನು ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ವಾಚಿಸಿದರು. ಶಾಲೆಗೆ ವಿವಿಧ ರೀತಿಯಲ್ಲಿ ಸೌಲಭ್ಯಗಳನ್ನು ಒದಗಿಸಿದ ಮತ್ತು ಸಹಕರಿಸಿದ ಉಮೇಶ್ ಕೆ ಮಾಜಿ ಅಧಿಕಾರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಇಲಾಖೆ , ಶ್ರೀ ರಾಜನ್ ಪೆಟ್ರೋನೆಟ್ ಲಿಮಿಟೆಡ್ ನೆರಿಯಾ, ಮರಿಯಪ್ಪ ಗೌಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ, ಸೌತಡ್ಕ ದೇವಸ್ಥಾನಕ್ಕೆ ಮುಖ್ಯ ಅರ್ಚಕ ಸತ್ಯಪ್ರಿಯ ಕಲ್ಲೂರಾಯ , ಪ್ರಕಾಶ್ ರಾವ್, ಬಿಟ್ಸ್ ಅಂಡ್ ಬೈಟ್ಸ್ ಬೆಂಗಳೂರು, ಗಣೇಶ್ ಬಜಿಲ ಹಿಂದೂ ಧಾರ್ಮಿಕ ಸೇವಾ ಸಮಿತಿಯ ವ್ಯಕ್ತಿಗಳಿಗೆ ಗೌರವವನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ ಸದಸ್ಯರಾದ ಹರೀಶ್ ಸುವರ್ಣ, ಶ್ರೀಮತಿ ಭಾರತಿ,ಶ್ರೀಮತಿ ರೇವತಿ, ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ರಮ್ಯ , ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪ ಎನ್, ಶಾಲಾ ನಾಯಕ ಸುಜಿತ್ ಉಪಸ್ಥಿತರಿದ್ದರು.

ಪ್ರಸ್ತುತ ಸಾಲಿನ ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಎಸ್ ಎಸ್ ಎಲ್ ಸಿ ಡಿಸ್ಟಿಂಕ್ಷನ್ ಅಂಕ ಪಡೆದ ಕನ್ಯಾಡಿ 2 ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವೇದಿಕೆಯಲ್ಲಿದ್ದ ಗಣ್ಯರು ನೀಡಿದರು. ಪೋಷಕರಿಗೆ ನಡೆಸಿದ ವಿವಿಧ ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ ಸ್ವಾಗತಿಸಿ, ಅತಿಥಿ ಶಿಕ್ಷಕರಾದ ಶ್ರೀಮತಿ ಶ್ವೇತಾ ಧನ್ಯವಾದವಿತ್ತರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ ಮತ್ತು ಶ್ರೀಮತಿ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಿಂಚನವು ಸಾಯಂಕಾಲ ವಿದ್ಯಾರ್ಥಿಗಳ ವಿವಿಧ ರೀತಿಯ ನೃತ್ಯ, ರೂಪಕಗಳಿಂದ ಬಹಳ ವಿಜೃಂಭಣೆಯಿಂದ ನೆರವೇರಿತು.

Related posts

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya
error: Content is protected !!