25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

ಅಳದಂಗಡಿ : ಸರ್ಕಾರಿ ಕಾಲೇಜುಗಳಲ್ಲಿ ಕಲಿತ ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಿ ಬದುಕಲು ಕಲಿಯುತ್ತಾರೆ. ಜೀವನದ ಕಷ್ಟಗಳನ್ನು ಎದುರಿಸಲು ಶಕ್ತರಾಗುತ್ತಾರೆ. ಸಾಧಕರ ಜೀವನ ಚರಿತ್ರೆಯನ್ನು ಓದಿ ತಾವು ಕೂಡ ಸಮಾಜಮುಖಿ ಕಾರ್ಯಗಳನ್ನು ಮೈಗೂಡಿಸಿಕೊಂಡು ಸಾಧಕರಾಗಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜು , ಕೊಕ್ರಾಡಿ ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟೀಸ್ ರವರು ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಸಮಾರಂಭವನ್ನು ಅಳದಂಗಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಸರಸ್ವತಿಯವರು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಿಬಿಸಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಇವರು ವಹಿಸಿ ಸಂಸ್ಥೆಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಗ್ರಾಪಂ ಸದಸ್ಯರಾದ ಹರೀಶ್ ಆಚಾರ್ಯ ಮತ್ತು ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕರಾದ ರೋಹಿತ್ ಮತ್ತು ಸುಶಾಂತ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿಭಾ ಪುರಸ್ಕಾರದ ಎಲ್ಲಾ ಬಹುಮಾನಗಳ ಪ್ರಾಯೋಜಕತ್ವವನ್ನು ಗುರುವಾಯನಕೆರೆ ಶಕ್ತಿನಗರದ ಉದ್ಯಮಿಗಳಾದ ರಾಜೇಶ್ ಶೆಟ್ಟಿ ನವಶಕ್ತಿ ವಹಿಸಿದ್ದರು.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯನ್ನು ಪಡೆದ 12 ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಅತಿಥಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಲಾಯಿತು.


ಪ್ರಾಂಶುಪಾಲರಾದ ಸನ್ನಿ ಕೆ ಎಂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗೈದರು. ಇತಿಹಾಸ ಉಪನ್ಯಾಸಕರಾದ ಭಾರತಿಯವರು ವರದಿ ವಾಚಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ಕುಮಾರ್ ಮತ್ತು ರಸಾಯನಶಾಸ್ತ್ರ ಉಪನ್ಯಾಸಕ ರಾಮಚಂದ್ರ ಎ ಜಿ ವಾಚಿಸಿದರು. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳ ಪಟ್ಟಿಯನ್ನು ಭೌತಶಾಸ್ತ್ರ ಉಪನ್ಯಾಸಕರಾದ ಪಲ್ಲವಿ ಮತ್ತು ಕ್ರೀಡೆಯಲ್ಲಿ ವಿಜೇತರಾದವರ ಪಟ್ಟಿಯನ್ನು ಅರ್ಥಶಾಸ್ತ್ರ ಉಪನ್ಯಾಸಕ ಹರೀಶ್ ರೈ ವಾಚಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಜಯ ಪೂಜಾರಿ ನಿರೂಪಿಸಿ ಗಣಿತಶಾಸ್ತ್ರ ಉಪನ್ಯಾಸಕರಾದ ಸದಾನಂದ ಕುಲಾಲ್ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!