27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಜಿರೆ ಗಾಂಧಿನಗರ (ಕಕ್ಕೇಜಾಲ್ ) ಬ್ರಾಂಚ್ ಸಮಿತಿ ವತಿಯಿಂದ ಮರ್ಹೂಂ ಹೈದರ್ ನೀರ್ಸಾಲ್ ಚಾರಿಟೇಬಲ್ ಟ್ರಸ್ಟ್ ಬ್ಲಡ್ ಡೋನರ್ಸ್ ಫಾರಂ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಎ. ಜೆ ಆಸ್ಪತ್ರೆ ಮಂಗಳೂರು ಇದರ ಸಹಯೋಗದದೊಂದಿಗೆ ಮರ್ಹೂಂ ಹೈದರ್ ನೀರ್ಸಾಲ್, ಸಾಹುಲ್ ಹಮೀದ್ ಹಾಗೂ ಅಲ್ತಾಫ್ ವಾಫಿರ್ ಸ್ಮರಣಾರ್ಥ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಗಾಂಧಿನಗರ ವಠಾರದಲ್ಲಿ ಕಕ್ಕೇಜಾಲ್ ಬ್ರಾಂಚ್ ಸಮಿತಿ ಅಧ್ಯಕ್ಷ ಇರ್ಫಾನ್ ಕಕ್ಕೆಜಲ್ ನೇತೃತ್ವದಲ್ಲಿ ನಡೆಯಿತು.

ರಕ್ತದಾನ ಶಿಬಿರ ಉದ್ಘಾಟಿಸಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಮಾತನಾಡಿದರು. ಎ.ಜೆ ಆಸ್ಪತ್ರೆಯ ರಕ್ತನಿಧಿಯ ಸಂಯೋಜಕರು ಹಾಗೂ ವೈದ್ಯ ಗೋಪಾಲ ಕೃಷ್ಣ, ಶ್ರೀ ಗುರುದೇವ ಕಾಲೇಜಿನ ಸಹಪ್ರಾಂಶುಪಾಲರಾದ ಸಮಿಉಲ್ಲಾ ಮಾಸ್ಟರ್ ಕಾರ್ಯಕ್ರಮವನ್ನು ಉದ್ದೇಶಿಸಿ ಅತಿಥಿ ಮಾತುಗಳನ್ನಾಡಿದರು.



ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರು ನವಾಜ್ ಶರೀಫ್ ಕಟ್ಟೆ ಕಾರ್ಯಕ್ರಮದ ಕುರಿತು ಮುಖ್ಯ ಭಾಷಣ ಮಾಡಿದರು.



ವೇದಿಕೆಯಲ್ಲಿ ಖಲೀಫಾ ಜುಮಾ ಮಸೀದಿ ಗಾಂಧಿನಗರ ಅಧ್ಯಕ್ಷ ಅಕ್ಬರಲಿ, ಗಲ್ಫ್ ಘಟಕದ ಅಧ್ಯಕ್ಷ ಎ. ಬಿ. ಟಿ ಇಸ್ಮಾಯಿಲ್, ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಅಲಿ, ಉಜಿರೆ ಬ್ಲಾಕ್ ಉಪಾಧ್ಯಕ್ಷ ಫಜಲ್ ರೆಹಮಾನ್, ಸರ್ವಾನ್ ಕಕ್ಕೆಜಾಲ್, ಮರ್ಹೂಂ ಹೈದರ್ ನೀರ್ಸಾಲ್ ಚಾರಿಟೇಬಲ್ ಟ್ರಸ್ಟ್ ಬ್ಲಡ್ ಡೋನರ್ಸ್ ಫಾರಂ ಬೆಳ್ತಂಗಡಿ ಇದರ ಸಂಯೋಜಕರು ಸಲೀಂ ಮುರ ಹಾಗೂ ಊರಿನ ನಾಗರಿಕರು ಇತರರು ಉಪಸ್ಥಿತರಿದ್ದರು.



ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ರಕ್ತದಾನ ಮಾಡಿದರು. ಸಿನಾನ್ ಸ್ವಾಗತಿಸಿ, ಆತಿಶ್ ವಂದಿಸಿದರು. ಮರ್ಷಾದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

Related posts

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya
error: Content is protected !!