25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಜಿರೆ ಗಾಂಧಿನಗರ (ಕಕ್ಕೇಜಾಲ್ ) ಬ್ರಾಂಚ್ ಸಮಿತಿ ವತಿಯಿಂದ ಮರ್ಹೂಂ ಹೈದರ್ ನೀರ್ಸಾಲ್ ಚಾರಿಟೇಬಲ್ ಟ್ರಸ್ಟ್ ಬ್ಲಡ್ ಡೋನರ್ಸ್ ಫಾರಂ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಎ. ಜೆ ಆಸ್ಪತ್ರೆ ಮಂಗಳೂರು ಇದರ ಸಹಯೋಗದದೊಂದಿಗೆ ಮರ್ಹೂಂ ಹೈದರ್ ನೀರ್ಸಾಲ್, ಸಾಹುಲ್ ಹಮೀದ್ ಹಾಗೂ ಅಲ್ತಾಫ್ ವಾಫಿರ್ ಸ್ಮರಣಾರ್ಥ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಗಾಂಧಿನಗರ ವಠಾರದಲ್ಲಿ ಕಕ್ಕೇಜಾಲ್ ಬ್ರಾಂಚ್ ಸಮಿತಿ ಅಧ್ಯಕ್ಷ ಇರ್ಫಾನ್ ಕಕ್ಕೆಜಲ್ ನೇತೃತ್ವದಲ್ಲಿ ನಡೆಯಿತು.

ರಕ್ತದಾನ ಶಿಬಿರ ಉದ್ಘಾಟಿಸಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಮಾತನಾಡಿದರು. ಎ.ಜೆ ಆಸ್ಪತ್ರೆಯ ರಕ್ತನಿಧಿಯ ಸಂಯೋಜಕರು ಹಾಗೂ ವೈದ್ಯ ಗೋಪಾಲ ಕೃಷ್ಣ, ಶ್ರೀ ಗುರುದೇವ ಕಾಲೇಜಿನ ಸಹಪ್ರಾಂಶುಪಾಲರಾದ ಸಮಿಉಲ್ಲಾ ಮಾಸ್ಟರ್ ಕಾರ್ಯಕ್ರಮವನ್ನು ಉದ್ದೇಶಿಸಿ ಅತಿಥಿ ಮಾತುಗಳನ್ನಾಡಿದರು.



ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರು ನವಾಜ್ ಶರೀಫ್ ಕಟ್ಟೆ ಕಾರ್ಯಕ್ರಮದ ಕುರಿತು ಮುಖ್ಯ ಭಾಷಣ ಮಾಡಿದರು.



ವೇದಿಕೆಯಲ್ಲಿ ಖಲೀಫಾ ಜುಮಾ ಮಸೀದಿ ಗಾಂಧಿನಗರ ಅಧ್ಯಕ್ಷ ಅಕ್ಬರಲಿ, ಗಲ್ಫ್ ಘಟಕದ ಅಧ್ಯಕ್ಷ ಎ. ಬಿ. ಟಿ ಇಸ್ಮಾಯಿಲ್, ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಅಲಿ, ಉಜಿರೆ ಬ್ಲಾಕ್ ಉಪಾಧ್ಯಕ್ಷ ಫಜಲ್ ರೆಹಮಾನ್, ಸರ್ವಾನ್ ಕಕ್ಕೆಜಾಲ್, ಮರ್ಹೂಂ ಹೈದರ್ ನೀರ್ಸಾಲ್ ಚಾರಿಟೇಬಲ್ ಟ್ರಸ್ಟ್ ಬ್ಲಡ್ ಡೋನರ್ಸ್ ಫಾರಂ ಬೆಳ್ತಂಗಡಿ ಇದರ ಸಂಯೋಜಕರು ಸಲೀಂ ಮುರ ಹಾಗೂ ಊರಿನ ನಾಗರಿಕರು ಇತರರು ಉಪಸ್ಥಿತರಿದ್ದರು.



ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ರಕ್ತದಾನ ಮಾಡಿದರು. ಸಿನಾನ್ ಸ್ವಾಗತಿಸಿ, ಆತಿಶ್ ವಂದಿಸಿದರು. ಮರ್ಷಾದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!