25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

ಉಜಿರೆ: “ಒಂದೊಂದು ನಿಮಿಷವೂ ಬಂಗಾರದ ನಾಣ್ಯಕ್ಕೆ ಸಮ. ಪ್ರತಿಯೊಂದು ಸ್ಪರ್ಧೆಯ ಉದ್ದೇಶ ನಿಮ್ಮಲ್ಲಿರುವ ಸಾಮರ್ಥ್ಯವನ್ನು ಹೊರತೆಗೆಯುವುದೇ ಆಗಿದೆ. ನಮ್ಮನ್ನು ಇನ್ನೊಬ್ಬರಿಗೆ ಹೋಲಿಸುವುದರ ಬದಲು ನಮ್ಮಲ್ಲಿರುವ ಪ್ರತಿಭೆಯನ್ನು ನಾವು ಗುರುತಿಸುವ” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ “ಬಹುಮಾನ ವಿತರಣಾ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನಡೆಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಡಾ. ದಿಲೀಪ್ ಕುಮಾರ್, ಅತಿಷಯ ಜೈನ್, ವಿಜೇಶ್ ಜೈನ್ ಹಾಗೂ ಶರ್ಮಿತ್ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ಗುಂಪು ಗಾಯನ, ಕೊಳಲು, ಹಾರ್ಮೋನಿಯಂ, ತಬಲ ಹಾಗೂ ವೀಣಾ ವಾದನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ಹಾಗೂ ಸವಿತಾ ವೇದ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya
error: Content is protected !!