30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ ll: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವದ ಪ್ರಯುಕ್ತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧೆಯ ಬಹುಮಾನವನ್ನು ಡಿ.12 ರಂದು ವಿತರಿಸಲಾಯಿತು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್ ಬಹುಮಾನ ನೀಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಭಾರತಿ, ಎಸ್ ಡಿ ಎಂ ಸಿ ಅಧ್ಯಕ್ಷ ನಂದಾ ಕೆ, ಉಪಾಧ್ಯಕ್ಷೆ ಶ್ರೀಮತಿ ರಮ್ಯ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪ ಎನ್, ಎಸ್ ಡಿ ಎಂ ಸಿ ಸದಸ್ಯರು ಮಕ್ಕಳಿಗೆ ಬಹುಮಾನವನ್ನು ವಿತರಿಸಲು ಕೈಜೋಡಿಸಿದರು.

ಶಾಲೆಯ ಸಹ ಶಿಕ್ಷಕರು, ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕರಾದ ಶ್ರೀಮತಿ ಶ್ವೇತ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ನಾಗರಾಜ್ ಬಾರ್ಕೆರ್ ನಿರೂಪಿಸಿದರು.

Related posts

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya
error: Content is protected !!