24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಖ್ಯಾತಿಯನ್ನು ಗಳಿಸಿರುವ ಇಲ್ಲಿಯ ಸಂತೆಕಟ್ಟೆಯ ಐ.ಜೆ ಕಾಂಪ್ಲೆಕ್ಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ವ್ಯವಹಾರ ನಡೆಸಿ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿರುವ ಹೋಟೇಲ್ ಸಮಡೈನ್ ಇದರ ನೂತನ ಸಹಸಂಸ್ಥೆ ಲಾಯಿಲದ ಪ್ರಸನ್ನ ಕಾಲೇಜು ಕ್ಯಾಂಪಸ್‌ನಲ್ಲಿ ಡಿ.16 ರಂದು ಶುಭಾರಂಭಗೊಂಡಿತು.


ನೂತನ ಸಮಡೈನ್ ಸಹ ಸಂಸ್ಥೆಯನ್ನು ಮಾಜಿ ಸಚಿವರು ಹಾಗೂ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೆ. ಗಂಗಾಧರ ಗೌಡ ಅವರು ಉದ್ಘಾಟಿಸಿ, ಬೆಳ್ತಂಗಡಿಯಲ್ಲಿ ಜನಪ್ರಿಯತೆನ್ನು ಪಡೆದಿರುವ ಸಮಡೈನ್ ಹೋಟೇಲ್‌ನ ಸಹ ಸಂಸ್ಥೆಯು ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನ ಮಾಲಕ ಮೋಹನ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಮೆಹಬೂಬ್, ಮಹಮ್ಮದ್ ಹುಸೈನ್ ಉದಯನಗರ, ಪ್ರಸನ್ನ ಕಾಲೇಜಿನ ಸಿಬ್ಬಂದಿಗಳು, ಹೋಟೆಲ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಹೋಟೇಲ್‌ನ ಮಾಲಕರಾದ ಅಬೂಬಕ್ಕರ್ ಅವರು ಆಗಮಿಸಿದ ಅತಿಥಿ-ಗಣ್ಯರನ್ನು ಸ್ವಾಗತಿಸಿ, ಕೃತಜ್ಞತೆ ವ್ಯಕ್ತಪಡಿಸಿದರು.
ನೂತನ ಹೋಟೇಲ್‌ನಲ್ಲಿ ವಿವಿಧ ರೀತಿಯ ಸೌತ್ ಇಂಡಿಯನ್, ನಾರ್ತ್ ಇಂಡಿಯನ್, ಸೀಪುಡ್, ಚೈನೀಸ್ ಚಾರ್ಟ್ಸ್, ಜ್ಯೂಸ್ ಮತ್ತು ಐಸ್‌ಕ್ರೀಂಗಳು ಗ್ರಾಹಕರ ಸೇವೆಗೆ ಲಭ್ಯವಿದೆ ಎಂದು ಮಾಲಕ ಅಬೂಬಕ್ಕರ್ ಅವರು ತಿಳಿಸಿದ್ದಾರೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya
error: Content is protected !!