September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಖ್ಯಾತಿಯನ್ನು ಗಳಿಸಿರುವ ಇಲ್ಲಿಯ ಸಂತೆಕಟ್ಟೆಯ ಐ.ಜೆ ಕಾಂಪ್ಲೆಕ್ಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ವ್ಯವಹಾರ ನಡೆಸಿ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿರುವ ಹೋಟೇಲ್ ಸಮಡೈನ್ ಇದರ ನೂತನ ಸಹಸಂಸ್ಥೆ ಲಾಯಿಲದ ಪ್ರಸನ್ನ ಕಾಲೇಜು ಕ್ಯಾಂಪಸ್‌ನಲ್ಲಿ ಡಿ.16 ರಂದು ಶುಭಾರಂಭಗೊಂಡಿತು.


ನೂತನ ಸಮಡೈನ್ ಸಹ ಸಂಸ್ಥೆಯನ್ನು ಮಾಜಿ ಸಚಿವರು ಹಾಗೂ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೆ. ಗಂಗಾಧರ ಗೌಡ ಅವರು ಉದ್ಘಾಟಿಸಿ, ಬೆಳ್ತಂಗಡಿಯಲ್ಲಿ ಜನಪ್ರಿಯತೆನ್ನು ಪಡೆದಿರುವ ಸಮಡೈನ್ ಹೋಟೇಲ್‌ನ ಸಹ ಸಂಸ್ಥೆಯು ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನ ಮಾಲಕ ಮೋಹನ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಮೆಹಬೂಬ್, ಮಹಮ್ಮದ್ ಹುಸೈನ್ ಉದಯನಗರ, ಪ್ರಸನ್ನ ಕಾಲೇಜಿನ ಸಿಬ್ಬಂದಿಗಳು, ಹೋಟೆಲ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಹೋಟೇಲ್‌ನ ಮಾಲಕರಾದ ಅಬೂಬಕ್ಕರ್ ಅವರು ಆಗಮಿಸಿದ ಅತಿಥಿ-ಗಣ್ಯರನ್ನು ಸ್ವಾಗತಿಸಿ, ಕೃತಜ್ಞತೆ ವ್ಯಕ್ತಪಡಿಸಿದರು.
ನೂತನ ಹೋಟೇಲ್‌ನಲ್ಲಿ ವಿವಿಧ ರೀತಿಯ ಸೌತ್ ಇಂಡಿಯನ್, ನಾರ್ತ್ ಇಂಡಿಯನ್, ಸೀಪುಡ್, ಚೈನೀಸ್ ಚಾರ್ಟ್ಸ್, ಜ್ಯೂಸ್ ಮತ್ತು ಐಸ್‌ಕ್ರೀಂಗಳು ಗ್ರಾಹಕರ ಸೇವೆಗೆ ಲಭ್ಯವಿದೆ ಎಂದು ಮಾಲಕ ಅಬೂಬಕ್ಕರ್ ಅವರು ತಿಳಿಸಿದ್ದಾರೆ.

Related posts

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!