25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

ಬಂದಾರು :ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಇದರ ಆಶ್ರಯದಲ್ಲಿ 9 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮುಕ್ತ ಮಹಿಳೆಯರ ತ್ರೋಬಾಲ್ ಮತ್ತು ಪುರುಷರ ಮತ್ತು ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ ಡಿ. 15 ರಂದು ಶಿವಫ್ರೆಂಡ್ಸ್ ಕ್ರೀಡಾಂಗಣ ಖಂಡಿಗ – ಮೈರೋಳ್ತಡ್ಕದಲ್ಲಿ ನಡೆಯಿತು.

ಕುರಾಯ ಶಿವ ಫ್ರೆಂಡ್ಸ್ ಅಧ್ಯಕ್ಷ ಸುಂದರ ಗೌಡ ಖಂಡಿಗ ಸಭಾದ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುಪತಿ ಭಟ್ ಅನಾಬೆ , ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸಂದೀಪ್ ಎಂ ಮಿತ್ತೂರು ಮೆಸ್ಕಾಂ ಇಲಾಖೆ ಮಂಗಳೂರು, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಶೋಕ ಗೌಡ ಪಾಂಜಾಳ, ದಿನೇಶ್ ಗೌಡ ದಾಸರಕೋಡಿ ಭಾಗವಹಿಸಿದರು.


ಕು. ಕುಸುಮ ಎಂ ಎಸ್ ನೆರೋಲ್ದಪಲ್ಕೆ -ಪೆರ್ಲ ಬೈಪಾಡಿ. – ಯುವ ಗಾಯಕಿ, ಚಂದ್ರಹಾಸ ಕುಂಬಾರ ಶ್ರೀರಾಮನಗರ ಬಂದಾರು – ಯುವ ಕವಿ, ಕು. ತೇಜಸ್ವಿನಿ ಪೂಜಾರಿ ಬೊಲ್ಜೆ – ಬಂದಾರು, ಸೀನಿಯರ್ & ಜೂನಿಯರ್ ವಿಭಾಗದಲ್ಲಿ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಚಿನ್ನದ ಪದಕ ವಿಜೇತೆ, ಶ್ರೇಯಸ್ ಬೆಂಗಾಯಿ ರಾಷ್ಟ ಮಟ್ಟದ ಕ್ರೀಡಾಪಟು, ಇವರಿಗೆ ಸನ್ಮಾನ ಹಾಗೂ ಸಂದೀಪ್ ಎಂ ಮಿತ್ತೂರು ಮೆಸ್ಕಾಂ ಸಿಬ್ಬಂದಿ ಇವರಿಗೆ ಬೀಳ್ಕೊಡುಗೆ ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿದರು.


ಶಿವಫ್ರೆಂಡ್ಸ್ ಸದಸ್ಯರೆಲ್ಲರೂ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya
error: Content is protected !!