23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

ಉಜಿರೆ: ಬೆಳಾಲು ನಿನ್ನಿಕಲ್ಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಡಿ.16 ರಂದು ನಡೆದಿದೆ.

ಮೃತ ವ್ಯಕ್ತಿ ಬೆಳ್ತಂಗಡಿ ಉಗ್ರಾಣಿಬೆಟ್ಟು ನಿವಾಸಿ ಸುಂದರ ಆಚಾರ್ಯ(79ವ) ಮೃತ ದುರ್ದೈವಿ.

ಡಿ.15 ರಂದು ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದ್ದು ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.

ಮೃತರು ಪತ್ನಿ ಭವಾನಿ, ಇಬ್ಬರು ಪುತ್ರರಾದ ಜಗದೀಶ್, ಪ್ರಕಾಶ್, ಇಬ್ಬರು ಪುತ್ರಿಯರಾದ ಉಷಾ, ವಾಗಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya
error: Content is protected !!