22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

ಉಜಿರೆ: ಧರ್ಮ ಪ್ರಭಾವನೆಯೊಂದಿಗೆ ಜೈನರ ಆಚಾರ-ವಿಚಾರಗಳು, ಧರ್ಮ ಮತ್ತು ಸಂಸ್ಕೃತಿಯ ಬಗ್ಯೆ ಅರಿವು, ಜಾಗೃತಿ ಮೂಡಿಸುವುದೇ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕದ ಉದ್ದೇಶವಾಗಿದೆ ಎಂದು ಜೈನಕಾಶಿ ಮೂಡಬಿದ್ರೆಯ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೇಳಿದರು.


ಅವರು ಡಿ.15 ರಂದು ವೇಣೂರಿನಲ್ಲಿ ಬಾಹುಬಲಿ ಸಭಾಭವನದಲ್ಲಿ2024ರ ಫೆಬ್ರವರಿ 22 ರಿಂದ ಮಾರ್ಚ್ ಒಂದರ ವರೆಗೆ ನಡೆದ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕದ ಸ್ಮರಣಾರ್ಥ ಪ್ರಕಟಿಸಿದ “ಸಿರಿ ಬಾಹುಬಲಿ” ಸ್ಮರಣಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.


ಮನ, ವಚನ, ಕಾಯದಿಂದ ಅಹಿಂಸೆಯ ಪರಿಪಾಲನೆ ಹಾಗೂ “ಬದುಕು ಮತ್ತು ಬದುಕಲು ಬಿಡು” ಎಂಬುದು ಜೈನಧರ್ಮದ ಸಾರವಾಗಿದ್ದು ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂದು ಭಗವಾನ್ ಬಾಹುಬಲಿ ಸಾಧಿಸಿ ತೋರಿಸಿದ್ದಾರೆ.
ವಿವಿಧ ಸಮಿತಿಗಳ ಸಕ್ರಿಯ ಸಹಕಾರ, ಸರ್ಕಾರದ ನೆರವು ಹಾಗೂ ದಾನಿಗಳ ಉದಾರ ಕೊಡುಗೆಯಿಂದ ಮಸ್ತಕಾಭಿಷೇಕ ಯಶಸ್ವಿಯಾದ ಬಗ್ಯೆ  ಅವರು ಸಂತಸ ವ್ಯಕ್ತಪಡಿಸಿದರು.

55,62,000/- ರೂ. ಉಳಿತಾಯ : ಮಹಾಮಸ್ತಕಾಭಿಷೇಕದ ಲೆಕ್ಕಪತ್ರದ ಸವಿವರ ಮಾಹಿತಿ ನೀಡಿದ ಕೋಶಾಧಿಕಾರಿ ಪಿ. ಜಯರಾಜ ಕಂಬಳಿ, ಎಲ್ಲಾ ವೆಚ್ಚಗಳು ಕಳೆದು 55,62,000 ರೂ. ಉಳಿಕೆಯಾಗಿದ್ದು ಇದನ್ನು ಬ್ಯಾಂಕಿನಲ್ಲಿ ನಿರಖು ಠೇವಣಿ ಇಡಲಾಗಿದೆ ಎಂದು ತಿಳಿಸಿದರು.


ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ನೇತೃತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಕಾಲಿಕ ಸಹಕಾರದಿಂದ ಮಸ್ತಕಾಭಿಷೇಕ ಯಶಸ್ವಿಯಾಗಿ ನಡೆದಿದೆ ಎಂದರು.


ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ ಶೆಟ್ಟಿ, ಹಾ.ಮಾ.ನಾ. ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಡಾ. ಎಸ್.ಡಿ. ಶೆಟ್ಟಿ ಮತ್ತು ಮುನಿರಾಜ ರೆಂಜಾಳ ಸಂಪಾದಕರಾಗಿದ್ದು ಪ್ರಕಟಿಸಿದ “ಸಿರಿ ಬಾಹುಬಲಿ” ಸ್ಮರಣಸಂಚಿಕೆಯನ್ನು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಡಾ. ಎ. ಜಯಕುಮಾರ ಶೆಟ್ಟಿ ಉಪಸ್ಥಿತರಿದ್ದರು.


ಮಸ್ತಕಾಭಿಷೇಕ ಮಹೋತ್ಸವಕ್ಕೆ ವಿಶೇಷ ಸಹಕಾರ ಮತ್ತು ನೆರವು ನೀಡಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಂ.ಆರ್.ಪಿ.ಎಲ್. ನ ಎಂಜಿನಿಯರ್ ಸ್ವಾಮಿಪ್ರಸಾದ್, ಸ್ಮರಣಸಂಚಿಕೆ ಸಂಪಾದಕ ಡಾ. ಎ. ಜಯಕುಮಾರ ಶೆಟ್ಟಿ, ಅಟ್ಟಳಿಗೆ ನಿರ್ಮಾಣ ಮಾಡಿದ ಮಾಣಿಯ ಪದ್ಮಪ್ರಸಾದ್ ಮತ್ತು ಮಹಾವೀರ ಪ್ರಸಾದ್ ಅವರನ್ನು ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿದ ಅಳದಂಗಡಿ ಅರಮನೆಯ ತಿಮ್ಮಣರಸರಾದ ಡಾ. ಪದ್ಮಪ್ರಸಾದ ಅಜಿಲರು ಮಾತನಾಡಿ ಮಹಾಮಸ್ತಕಾಭಿಷೇಕ ಸರ್ವರ ಸಹಕಾರದಿಂದ ಯಶಸ್ವಿಯಾಗಿ ನಡೆದಿದ್ದು ಇದರಿಂದಾಗಿ ಜೈನರ ಬಗ್ಯೆ ಎಲ್ಲಾ ಸಮಾಜಬಾಂಧವರಿಗೆ ವಿಶೇಷ ಗೌರವ, ಅಭಿಮಾನ ಮೂಡಿಬಂದಿದೆ.


ವೇಣೂರಿನ ದಿಗಂಬರ ಜೈನತೀರ್ಥಕ್ಷೇತ್ರ ಸಮಿತಿ ವತಿಯಿಂದ ಸರ್ವರ ಸಹಕಾರದೊಂದಗೆ ಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನಡೆಸಿದ ಬಗ್ಯೆ ಅವರು ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದರು.
ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್‌ಕುಮಾರ್ ಇಂದ್ರ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.
ಕಾರ್ಯಕ್ರಮ ನಿರ್ವಹಿಸಿದ ಮಹಾವೀರ ಜೈನ್ ಮೂಡುಕೋಡಿಗುತ್ತು ಕೊನೆಯಲ್ಲಿ ಧನ್ಯವಾದವಿತ್ತರು.

Related posts

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya
error: Content is protected !!