30 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

ಸೋಣಂದೂರು : ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೊಣಂದೂರು ಪಣಕಜೆ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಅಸೋಸಿಯೇಷನ್ ಇದರ ಸಹಕಾರದೊಂದಿಗೆ 5 ನೇ ವರ್ಷದ 55 ಕೆಜಿ ವಿಭಾಗದ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ ಡಿ15 ರoದು ಸೋಣಂದೂರು ಶಾಲಾ ಸಮೀಪದ ಮೈದಾನದಲ್ಲಿ ಜರಗಿತು.

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷೆ ಲೀಲಾವತಿ ವಸಂತ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ನಮ್ಮ ತುಳುನಾಡಿನಲ್ಲಿ ನಡೆಯುವಂತ ಕಬಡ್ಡಿ ಪಂದ್ಯಾಟಕ್ಕೆ ನಮ್ಮೆಲ್ಲರ ಸಹಕಾರ ಪ್ರೋತ್ಸಾಹ ಅಗತ್ಯವಾಗಿದೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಕಬಡ್ಡಿ ಹಾಡುವ ಮೂಲಕ ರಾಷ್ಟ್ರೀಯ ಮಟ್ಟಕ್ಕೆ ತೇರ್ಗಡೆ ಹೊಂದಬೇಕು ಎಂದು ಶುಭ ಹಾರೈಸಿದರು.

ಮಹಾಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷ ರಾಜೇಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ರಾಜರಾಮ ಶೆಟ್ಟಿ ಮುಂಡಾಡಿ ಗುತ್ತು ಕ್ರೀಡಾಂಗಣವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ನಿಯಾಜ್ ಪಣಕಜೆ, ಸೋಣಂದೂರು ಶಾಲೆ ಮುಖ್ಯೋಪಾಧ್ಯಾಯರು ಅನಿತಾ ರೇಷ್ಮಾ ಡಿಸೋಜ, ಜಗದೀಶ್ ಆಚಾರ್ಯ ಕಲ್ಲಾರಿ ಕಮ್ಯುನಿಕೇಶನ್ ಮಡಂತ್ಯಾರು, . ಎಸ್ ಬೇಬಿ ಸುವರ್ಣ ಸದಸ್ಯರು ಗ್ರಾ ಪಂಚಾಯತ್ ಮಾಲಾಡಿ, ಕೆ ಡಿ ಪಿ ಸದಸ್ಯರು ತಾ ಪಂಚಾಯತ್ ಬೆಳ್ತಂಗಡಿ ಉಪೇಂದ್ರ ಆಚಾರ್ಯ ಮುಂಡಾಡಿ ಪಣಕಜೆ, ರೋಶನ್ ಲೋಗೋ ಪಣಕಜೆ ಉದ್ಯಮಿಗಳು ಮಂಗಳೂರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದ ಸ್ಥಳೀಯ ಪ್ರತಿಭೆ ಸಂಗಮ್ ಜೆ ಎಚ್ ಇವರನ್ನು ಸನ್ಮಾನಿಸಲಾಯಿತು. ಮಹಾಮ್ಮಾಯಿ ಕಟ್ಟೆ ಫ್ರೆಂಡ್ಸ್, ಗೌರವಾಧ್ಯಕ್ಷ ಪ್ರಸಾದ್ ಪ್ರಭು, ಉಪಾಧ್ಯಕ್ಷರಾದ ಮೋಹನ್ ನಾಯ್ಕ್, ಕಾರ್ಯದರ್ಶಿ ದೀಪಕ್ ಕುಮಾರ್, ಜೊತೆ ಕಾರ್ಯದರ್ಶಿ ಪುನೀತ್, ಕೋಶಾಧಿಕಾರಿ ಸಚಿನ್, ಸುನಿಲ್., ಕೌರವ ಸಲಹೆಗಾರರಾದ ವೆಂಕಟೇಶ್ ಕುಲಾಲ್, ಸಂಜೀವ. ಪ್ರಕಾಶ್ ಪ್ರಭು, ಸುರೇಶ್, ಅರುಣ್ ಕುಲಾಲ್, ಸದಸ್ಯರಾದ. ಯೋಗೀಶ್ ಆರ್. ಚೇತನ್ ಕುಮಾರ್, ದೀಕ್ಷಿತ್ , ಅನಂತ ಆಚಾರ್ಯ, ಪ್ರತೀಕ್ ನಾಯಕ್, ಮನೋಜ್ ಕೋಟ್ಯಾನ್ , ಆನಂದ ನಾಯ್ಕ್, ರಮೇಶ್ ಕುಲಾಲ್, ಚಂದ್ರಹಾಸ, ವೆಂಕಟೇಶ್, ಕಿಶನ್, ಸತೀಶ್ ಉಪಸ್ಥಿತರಿದ್ದರು.

ಯೋಗಿ ಆರ್ ಸ್ವಾಗತಿಸಿ, ಹರೀಶ್ ನಾಯಕ್ ಪಣಕಜೆ ಕಾರ್ಯಕ್ರಮ ನಿರೂಪಿಸಿದರು. ಸಚಿನ್ ಧನ್ಯವಾದವಿತ್ತರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya
error: Content is protected !!