22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

ಮೂಡುಕೋಡಿ : ಇಲ್ಲಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ: ಭಾಗ್ಯ ರವರು ಸುಮಾರು 16 ವರ್ಷಗಳ ಹಿಂದೆ ನವೀನ್ ರವನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳು ಇರುತ್ತಾರೆ, ನವೀನ್ ಮದುವೆಯಾಗಿ ಸುಮಾರು 5 ವರ್ಷ ಅನ್ಯೋನ್ಯವಾಗಿದ್ದು ನಂತರ ವಿಪರೀತ ಮದ್ಯ ಸೇವಿಸುವ ಚಟಹೊಂದಿ ವಿನಾ: ಕಾರಣ ಆಗಾಗ ಕ್ಷುಲ್ಲಕ ವಿಚಾರದಲ್ಲಿ ಮಾತಿನ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದು, ಡಿ.15 ರಂದು ರಾತ್ರಿ ಆಪಾದಿತನು ತನ್ನ ಮನೆಯಾದ ಮೂಡುಕೋಡಿ ಗ್ರಾಮದ ಶಿವಕೃಪಾ ಎಂಬಲ್ಲಿ ಭಾಗ್ಯ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿದೆ ಎಂದು ಭಾಗ್ಯ ರವರು ದೂರಿದ್ದಾರೆ.

    Related posts

    ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

    Suddi Udaya

    ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

    Suddi Udaya

    ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

    Suddi Udaya

    ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

    Suddi Udaya

    ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

    Suddi Udaya

    ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

    Suddi Udaya
    error: Content is protected !!