25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

ಉಜಿರೆ: “ಒಂದೊಂದು ನಿಮಿಷವೂ ಬಂಗಾರದ ನಾಣ್ಯಕ್ಕೆ ಸಮ. ಪ್ರತಿಯೊಂದು ಸ್ಪರ್ಧೆಯ ಉದ್ದೇಶ ನಿಮ್ಮಲ್ಲಿರುವ ಸಾಮರ್ಥ್ಯವನ್ನು ಹೊರತೆಗೆಯುವುದೇ ಆಗಿದೆ. ನಮ್ಮನ್ನು ಇನ್ನೊಬ್ಬರಿಗೆ ಹೋಲಿಸುವುದರ ಬದಲು ನಮ್ಮಲ್ಲಿರುವ ಪ್ರತಿಭೆಯನ್ನು ನಾವು ಗುರುತಿಸುವ” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ “ಬಹುಮಾನ ವಿತರಣಾ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನಡೆಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಡಾ. ದಿಲೀಪ್ ಕುಮಾರ್, ಅತಿಷಯ ಜೈನ್, ವಿಜೇಶ್ ಜೈನ್ ಹಾಗೂ ಶರ್ಮಿತ್ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ಗುಂಪು ಗಾಯನ, ಕೊಳಲು, ಹಾರ್ಮೋನಿಯಂ, ತಬಲ ಹಾಗೂ ವೀಣಾ ವಾದನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ಹಾಗೂ ಸವಿತಾ ವೇದ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya
error: Content is protected !!