23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ ll: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವದ ಪ್ರಯುಕ್ತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧೆಯ ಬಹುಮಾನವನ್ನು ಡಿ.12 ರಂದು ವಿತರಿಸಲಾಯಿತು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್ ಬಹುಮಾನ ನೀಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಭಾರತಿ, ಎಸ್ ಡಿ ಎಂ ಸಿ ಅಧ್ಯಕ್ಷ ನಂದಾ ಕೆ, ಉಪಾಧ್ಯಕ್ಷೆ ಶ್ರೀಮತಿ ರಮ್ಯ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪ ಎನ್, ಎಸ್ ಡಿ ಎಂ ಸಿ ಸದಸ್ಯರು ಮಕ್ಕಳಿಗೆ ಬಹುಮಾನವನ್ನು ವಿತರಿಸಲು ಕೈಜೋಡಿಸಿದರು.

ಶಾಲೆಯ ಸಹ ಶಿಕ್ಷಕರು, ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕರಾದ ಶ್ರೀಮತಿ ಶ್ವೇತ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ನಾಗರಾಜ್ ಬಾರ್ಕೆರ್ ನಿರೂಪಿಸಿದರು.

Related posts

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!