September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ , ಪ್ರತಿಭಾ ಪುರಸ್ಕಾರ ಸನ್ಮಾನ, ಹಾಗೂ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಇಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಯುವ ಸಾಹಿತಿ ಚಂದ್ರಹಾಸ ಬಳೆಂಜ ಮಾತನಾಡಿ ಹತ್ತು ಹಲವು ಸಮಾಜಮುಖಿ ಕೆಲಸ ಕಾರ್ಯಗಳಿಂದ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಅಕ್ಷರಶಃ ಪಾಲಿಸಿಕೊಂಡು ಬಂದಿರುವ ಈ ಸಂಘಟನೆ ತಾಲೂಕಿಗೆ ಮಾದರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನೋರ್ವ ಅತಿಥಿ ಗ್ರಾಮ ಪಂಚಾಯತ್ ಕುಕ್ಕೇಡಿ ಅಧ್ಯಕ್ಷೆ ಶ್ರೀಮತಿ ಅನಿತಾರವರು ಮಾತಾಡಿ ಈ ಸಂಘಟನೆಯಿಂದ ಇನಷ್ಟು ಕೆಲಸ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.


ಕೋಟಿ ಚೆನ್ನಯ ಸೇವಾ ಸಂಘದ ಅಧ್ಯಕ್ಷರತ್ನಾಕರ ಸಾಲ್ಯಾನ್ ಅಂಕರ್ಜಾಲ್ ಮಾತನಾಡಿ ನನ್ನ ಎರಡು ವರ್ಷಗಳ ಅವಧಿಯಲ್ಲಿ ನಿಮ್ಮ ಎಲ್ಲರ ಸಹಕಾರದಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದು ಮುಂದೆಯೂ ಮುಂದಿನ ಅವಧಿಗೆ ಆಯ್ಕೆಯಾದ ಅಧ್ಯಕ್ಷರು ಪದಾಧಿಕಾರಿಗಳಿಗೆ ಸಹಕಾರ ನೀಡಿ ನಾವೆಲ್ಲರೂ ಒಟ್ಟಾಗಿ ಸಮಾಜಕ್ಕೆ ಮಾದರಿಯಾಗುವ ಕೆಲಸ ಕಾರ್ಯಗಳನ್ನು ಮಾಡಲು ಸಹಕರಿಸೋಣ ಎಂದು ಸಲಹೆವಿತ್ತರು.

ಕು.ಅನನ್ಯ ಮತ್ತು ಕು.ದಕ್ಷರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಘದ ಗೌರವ ಅಧ್ಯಕ್ಷ ಅಮ್ಮಾಜಿ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ರವಿ ಉಲ್ತೂರ್ ಸಂಘದ ವಾರ್ಷಿಕ ವರದಿಯನ್ನು ಮಂಡಿಸಿದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡುವ ಮೂಲಕ ಗುರುನಮನ ಕಾರ್ಯಕ್ರಮ ನಡೆಸಲಾಯಿತು. ಮನೋರಂಜನೆಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನುಶ್ರೀಮತಿ ಯಶಲತ ಅಮ್ಮಾಜಿ ಕೋಟ್ಯಾನ್ ನಡೆಸಿ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.

ಎಸೆಸೆಲ್ಸಿ ಮತ್ತು ಪಿಯುಸಿ ಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನೂತನ ಸಮಿತಿಗೆ ಸಂಘದ ದಾಖಲೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಪದಗ್ರಹಣ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಕುಕ್ಕೇಡಿಯ ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಪೂಜಾರಿ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ, ಕೋಟಿ ಚೆನ್ನಯ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಸತೀಶ್ ಕೆರಿಯರ್ ಶಿರ್ಲಾಲು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್ ಕಲ್ಲಾಜೆ, ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಯತೀಶ್ ಪೂಜಾರಿ ಕರಂಬಾರು ಮತ್ತಿತರರು ಉಪಸ್ಥಿತರಿದ್ದರು.

ಲೋಕಯ್ಯ ಪೂಜಾರಿ ಕಂಗ್ಗಿತ್ತಿಲು ಕಾರ್ಯಕ್ರಮ ನಿರೂಪಿಸಿದರು. ನವೀನ್ ಜೆ ಬುಳೆಕ್ಕಾರ ಧನ್ಯವಾದವಿತ್ತರು ಸಂಘದ ಎಲ್ಲ ಸದಸ್ಯರು ಸಹಕರಿಸಿದರು.

Related posts

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya
error: Content is protected !!