25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಖ್ಯಾತಿಯನ್ನು ಗಳಿಸಿರುವ ಇಲ್ಲಿಯ ಸಂತೆಕಟ್ಟೆಯ ಐ.ಜೆ ಕಾಂಪ್ಲೆಕ್ಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ವ್ಯವಹಾರ ನಡೆಸಿ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿರುವ ಹೋಟೇಲ್ ಸಮಡೈನ್ ಇದರ ನೂತನ ಸಹಸಂಸ್ಥೆ ಲಾಯಿಲದ ಪ್ರಸನ್ನ ಕಾಲೇಜು ಕ್ಯಾಂಪಸ್‌ನಲ್ಲಿ ಡಿ.16 ರಂದು ಶುಭಾರಂಭಗೊಂಡಿತು.


ನೂತನ ಸಮಡೈನ್ ಸಹ ಸಂಸ್ಥೆಯನ್ನು ಮಾಜಿ ಸಚಿವರು ಹಾಗೂ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೆ. ಗಂಗಾಧರ ಗೌಡ ಅವರು ಉದ್ಘಾಟಿಸಿ, ಬೆಳ್ತಂಗಡಿಯಲ್ಲಿ ಜನಪ್ರಿಯತೆನ್ನು ಪಡೆದಿರುವ ಸಮಡೈನ್ ಹೋಟೇಲ್‌ನ ಸಹ ಸಂಸ್ಥೆಯು ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನ ಮಾಲಕ ಮೋಹನ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಮೆಹಬೂಬ್, ಮಹಮ್ಮದ್ ಹುಸೈನ್ ಉದಯನಗರ, ಪ್ರಸನ್ನ ಕಾಲೇಜಿನ ಸಿಬ್ಬಂದಿಗಳು, ಹೋಟೆಲ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಹೋಟೇಲ್‌ನ ಮಾಲಕರಾದ ಅಬೂಬಕ್ಕರ್ ಅವರು ಆಗಮಿಸಿದ ಅತಿಥಿ-ಗಣ್ಯರನ್ನು ಸ್ವಾಗತಿಸಿ, ಕೃತಜ್ಞತೆ ವ್ಯಕ್ತಪಡಿಸಿದರು.
ನೂತನ ಹೋಟೇಲ್‌ನಲ್ಲಿ ವಿವಿಧ ರೀತಿಯ ಸೌತ್ ಇಂಡಿಯನ್, ನಾರ್ತ್ ಇಂಡಿಯನ್, ಸೀಪುಡ್, ಚೈನೀಸ್ ಚಾರ್ಟ್ಸ್, ಜ್ಯೂಸ್ ಮತ್ತು ಐಸ್‌ಕ್ರೀಂಗಳು ಗ್ರಾಹಕರ ಸೇವೆಗೆ ಲಭ್ಯವಿದೆ ಎಂದು ಮಾಲಕ ಅಬೂಬಕ್ಕರ್ ಅವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya
error: Content is protected !!