September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಖ್ಯಾತಿಯನ್ನು ಗಳಿಸಿರುವ ಇಲ್ಲಿಯ ಸಂತೆಕಟ್ಟೆಯ ಐ.ಜೆ ಕಾಂಪ್ಲೆಕ್ಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ವ್ಯವಹಾರ ನಡೆಸಿ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿರುವ ಹೋಟೇಲ್ ಸಮಡೈನ್ ಇದರ ನೂತನ ಸಹಸಂಸ್ಥೆ ಲಾಯಿಲದ ಪ್ರಸನ್ನ ಕಾಲೇಜು ಕ್ಯಾಂಪಸ್‌ನಲ್ಲಿ ಡಿ.16 ರಂದು ಶುಭಾರಂಭಗೊಂಡಿತು.


ನೂತನ ಸಮಡೈನ್ ಸಹ ಸಂಸ್ಥೆಯನ್ನು ಮಾಜಿ ಸಚಿವರು ಹಾಗೂ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೆ. ಗಂಗಾಧರ ಗೌಡ ಅವರು ಉದ್ಘಾಟಿಸಿ, ಬೆಳ್ತಂಗಡಿಯಲ್ಲಿ ಜನಪ್ರಿಯತೆನ್ನು ಪಡೆದಿರುವ ಸಮಡೈನ್ ಹೋಟೇಲ್‌ನ ಸಹ ಸಂಸ್ಥೆಯು ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನ ಮಾಲಕ ಮೋಹನ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಮೆಹಬೂಬ್, ಮಹಮ್ಮದ್ ಹುಸೈನ್ ಉದಯನಗರ, ಪ್ರಸನ್ನ ಕಾಲೇಜಿನ ಸಿಬ್ಬಂದಿಗಳು, ಹೋಟೆಲ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಹೋಟೇಲ್‌ನ ಮಾಲಕರಾದ ಅಬೂಬಕ್ಕರ್ ಅವರು ಆಗಮಿಸಿದ ಅತಿಥಿ-ಗಣ್ಯರನ್ನು ಸ್ವಾಗತಿಸಿ, ಕೃತಜ್ಞತೆ ವ್ಯಕ್ತಪಡಿಸಿದರು.
ನೂತನ ಹೋಟೇಲ್‌ನಲ್ಲಿ ವಿವಿಧ ರೀತಿಯ ಸೌತ್ ಇಂಡಿಯನ್, ನಾರ್ತ್ ಇಂಡಿಯನ್, ಸೀಪುಡ್, ಚೈನೀಸ್ ಚಾರ್ಟ್ಸ್, ಜ್ಯೂಸ್ ಮತ್ತು ಐಸ್‌ಕ್ರೀಂಗಳು ಗ್ರಾಹಕರ ಸೇವೆಗೆ ಲಭ್ಯವಿದೆ ಎಂದು ಮಾಲಕ ಅಬೂಬಕ್ಕರ್ ಅವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya
error: Content is protected !!