25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

ಉಜಿರೆ: ಲಾಯಿಲ ಕ್ಷಯರೋಗ ಆಸ್ಪತ್ರೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆ ಹಾಗೂ ಪ್ರಸ್ತುತ ಮಂಗಳೂರಿನ ಎಸ್.ಡಿ.ಎಂ ಕಣ್ಣಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯವಸ್ಥಾಪಕರಾಗಿ ಸೇರಿದಂತೆ ಒಟ್ಟು 38 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಶಿವಾನಂದ ಪ್ರಭು ಡಿ. 15ರಂದು ನಿಧನರಾಗಿದ್ದು, ಇವರಿಗೆ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೆಶಕರಾದ ಎಂ. ಜನಾರ್ದನ್ ಅವರು ಶ್ರದ್ಧಾಂಜಲಿ ಅರ್ಪಿಸಿ ಮಾತನಾಡುತ್ತಾ, ಶಿವಾನಂದ ಪ್ರಭು ಅವರು ಎಲ್ಲರೊಂದಿಗೆ ಬೆರೆಯುವ ಮತ್ತು ಸ್ಪಂಧಿಸುವ ಗುಣ ಹೊಂದಿದ್ದು, ಅತ್ಯುತ್ತಮ ಸೇವೆ ನೀಡುವ ಮೂಲಕ ಸಂಸ್ಥೆ ಹಾಗೂ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇವರ ನಿಧನದಿಂದ ಸಂಸ್ಥೆಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಭಗವಂತ ಮೃತರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದರು.


ರವೀಂದ್ರ ಗುಡಿಗಾರ್ ಹಾಗೂ ನರ್ಸಿಂಗ್ ಸಿಬ್ಬಂದಿ ವಿನೋದ ಇವರು ಶಿವಾನಂದ ಪ್ರಭು ಇವರೊಂದಿಗೆ ಸಹೋದ್ಯೋಗಿಗಳಾಗಿ ದುಡಿದ ಅನುಭವವನ್ನು ಹಂಚಿಕೊಂಡರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೆಂದ್ರ ಕುಮಾರ್. ಪಿ, ಇತರ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya
error: Content is protected !!