July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿ ಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಸಲಾಯಿತು.

ಸಾಯಂಕಾಲ ದೇವರ ಉತ್ಸವ ಹಾಗೂ ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಸಂದರ್ಭದಲ್ಲಿ ಪವಿತ್ರಪಾಣಿ ರಾಧಾಕೃಷ್ಣ ಎಡಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲ್ಲಾಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಊರ ಪರವೂರ ಗಣ್ಯರು ಉಪಸ್ಥಿತರಿದ್ದರು.

Related posts

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya
error: Content is protected !!