ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿ ಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಸಲಾಯಿತು.

ಸಾಯಂಕಾಲ ದೇವರ ಉತ್ಸವ ಹಾಗೂ ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಸಂದರ್ಭದಲ್ಲಿ ಪವಿತ್ರಪಾಣಿ ರಾಧಾಕೃಷ್ಣ ಎಡಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲ್ಲಾಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಊರ ಪರವೂರ ಗಣ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya
error: Content is protected !!