July 23, 2026
ತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ :ಬೆಳ್ತಂಗಡಿ ವಕೀಲರ ಸಂಘ (ರಿ ) ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ವಕೀಲರ ಭವನದಲ್ಲಿ ಡಿ. 17ರಂದು ಕ್ರಿಸ್ಮಸ್ ಆ ಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಶ್ರೀ ಮನು ಬಿ ಕೆ, ಪ್ರಧಾನ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ, ಹೆಚ್ಚುವರಿ ನ್ಯಾಯಾಧೀಶರಾದ ಶ್ರೀ ವಿಜಯೇಂದ್ರ ಟಿ ಎಚ್ ಉಪಸ್ಥಿತರಿದ್ದರು,ಗೌರವ ಅಥಿತಿಗಳಾಗಿ ಮಂಗಳೂರಿನ ಹಿರಿಯ ನ್ಯಾಯವಾದಿ ಶ್ರೀ ಎಂ ಪಿ ನೋರೋನ್ಹ ಕ್ರಿಸ್ಮಸ್ ಹಬ್ಬದ ಸಂದೇಶವನ್ನು ಸಾರಿದರು, ಈ ಸಂದರ್ಭದಲ್ಲಿ ಈ ಹಬ್ಬವು ಶಾಂತಿಯ ಸಂಕೇತವಾಗಿದೆ, ಇಂತಹ ಆಚರಣೆಯನ್ನು ಹಮ್ಮಿಕೊಂಡ ಬೆಳ್ತಂಗಡಿ ವಕೀಲರ ಸಂಘವನ್ನು ಅಭಿನಂದಿಸಿ ಈ ಸಂಘವು ಸಮಾಜಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.
ಅಧ್ಯಕ್ಷರ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಇವರು ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಕೀಲರಾದ ಫಾದರ್ ಶ್ರೀ ವಿನೋದ್ ಮಸ್ಕರೆನ್ಹಸ್ ರವರನ್ನು ಸನ್ಮಾನಿಸಲಾಯಿತು.
ಸೆಲ್ಫಿ ವಿತ್ ಸಾಂತಾ ಕ್ಲಾಸ್, ಲಕ್ಕಿ ಪರ್ಸನ್ ಆಫ್ ದಿ ಇಯರ್, ಲಕ್ಕಿ ಚೇರ್ ನ್ನು ಅಜೋಜಿಸಲಾಗಿತ್ತು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ವಿಶೇಷ ಆಕರ್ಷಣೆಯಾಗಿ ಸಾಂತ ಕ್ಲಾಸ್ ( ಸುಶಾಂತ್ ) ಹಬ್ಬದ ಮೆರುಗನ್ನು ಹೆಚ್ಚಿಸಿದರು.ಸಮಿತಿಯ ಅಧ್ಯಕ್ಷರಾದ ಶ್ರೀ ಅಲೋಶಿಯಸ್ ಎಸ್ ಲೋಬೊ ರವರು ಸ್ವಾಗತಿಸಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಬಿಕೆ ರವರು ನೆರೆದಿದ್ದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಯುವಕೀಲರ ವೇದಿಕೆ ಅಧ್ಯಕ್ಷರಾದ ಶ್ರೀ ಸಂದೀಪ್ ಡಿಸೋಜ ಇವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಶ್ರೀ ಸೇವಿಯರ್ ಪಾಲೇಲಿ ಹಾಗೂ ಶ್ರೀಮತಿ ಜೋಸ್ನಾ ವೇಲೋನ ಕೊರೆಯ ನಿರೂಪಿಸಿದರು.

Related posts

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!