23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಅಣಿ ದೂರದಲ್ಲಿ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.16 ರಂದು ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ.ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಅಣಿ ಅಂತರದಲ್ಲಿ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.

ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು.ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

Related posts

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya
error: Content is protected !!