April 2, 2025
ರಾಜ್ಯ ಸುದ್ದಿ

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್‌: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ

ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ ವಿಧಾನ ಪರಿಷತ್ ನಲ್ಲಿ ಒತ್ತಾಯಿಸಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ವಾಸಿಸುತ್ತಿದ್ದಾರೆ. ಯೆನೆಪೋಯ ಮೊಹಿದ್ದೀನ್ ಕುಂಞಿ ಅಂಡ್ ಕಂಪನಿ ಇವರಿಗೆ ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದಲ್ಲಿ ಒಟ್ಟು 4,028 ಎಕರೆ ಜಮೀನನ್ನು ಹೊಂದಿದ್ದು ಇದರಲ್ಲಿ 368 ಎಕರೆ ಜಮೀನು ಹೆಚ್ಚುವರಿ ಜಮೀನು ಹೊಂದಿರುವುದಾಗಿ ಬೆಳ್ತಂಗಡಿ ಭೂನ್ಯಾಯ ಮಂಡಳಿ ತೀರ್ಪು ನೀಡಿರುತ್ತದೆ. ತೀರ್ಪಿನ ವಿರುದ್ಧ ಭೂಮಾಲೀಕರ ಸಂಸ್ಥೆ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ ರಿಟ್ ಅರ್ಜಿಗಳನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿರುವುದು ತಿಳಿದುಬಂದಿರುತ್ತದೆ. ತದನಂತರದಲ್ಲಿ ಸರ್ಕಾರ ರಿಟ್ ಪಿಟಿಷನ್ ಆದೇಶದ ವಿರುದ್ಧ ರಿವ್ಯೂ ಪಿಟಿಷನ್ ಸಲ್ಲಿಸಿ ಹೈಕೋರ್ಟ್‌ನಲ್ಲಿ ತಿರಸ್ಕೃತವಾದ ಕಾರಣ ಸುರ್ಪೀಂಕೋರ್ಟ್‌ನಲ್ಲಿ ಸ್ಪೇಷಲ್ ಲೀವ್ ಪಿಟಿಷನ್ ದಾಖಲಿಸಿರುತ್ತದೆ.
ಕಂಪನಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯಂತೆ ಹೆಚ್ಚುವರಿ ಜಮೀನನ್ನು ಸರ್ಕಾರದ ವಶಕ್ಕೆ ಒಪ್ಪಿಸಬೇಕಾಗಿರುವುದರಿಂದ ಗೇಣಿದಾರರಲ್ಲದ ತಮ್ಮದೇ ವಲಯದ 53 ಜನರಿಗೆ 537 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಳ್ಳಲಾಗಿರುತ್ತದೆ ಎನ್ನುವುದು ಸರ್ಕಾರದ ವಾದವಾಗಿದ್ದು ಭೂ ನ್ಯಾಯ ಮಂಡಳಿಯಿಂದ ಮಂಜೂರಾಗಿರುವ ಜಮೀನನ್ನು ರದ್ದುಗೊಳಿಸಲು ಪ್ರಯತ್ನ ನಡೆಸಿರುತ್ತದೆ. ಆದರೆ ಮಲೆಕುಡಿಯ ಜನಾಂಗ ವಾಸಿಸುವ ಬಂಜಾರು ಮಲೆಕುಡಿಯು ಸಮುದಾಯ ಕಾಲೋನಿಯ 37 ಕುಟುಂಬಗಳಿಗೆ ಮಂಜೂರಾಗಿರುವ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆದು ಈ ಸಮುದಾಯದ ಜನರ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಶೂನ್ಯವೇಳೆಯಲ್ಲಿ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಇತ್ತೀಚೆಗಷ್ಟೇ ಶೇಖರ್ ಲಾಯಿಲ ಮನವಿ ಸಲ್ಲಿಸಿದ್ದರು.

Related posts

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya
error: Content is protected !!