25.7 C
ಪುತ್ತೂರು, ಬೆಳ್ತಂಗಡಿ
May 17, 2025
ರಾಜ್ಯ ಸುದ್ದಿ

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್‌: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ

ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ ವಿಧಾನ ಪರಿಷತ್ ನಲ್ಲಿ ಒತ್ತಾಯಿಸಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ವಾಸಿಸುತ್ತಿದ್ದಾರೆ. ಯೆನೆಪೋಯ ಮೊಹಿದ್ದೀನ್ ಕುಂಞಿ ಅಂಡ್ ಕಂಪನಿ ಇವರಿಗೆ ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದಲ್ಲಿ ಒಟ್ಟು 4,028 ಎಕರೆ ಜಮೀನನ್ನು ಹೊಂದಿದ್ದು ಇದರಲ್ಲಿ 368 ಎಕರೆ ಜಮೀನು ಹೆಚ್ಚುವರಿ ಜಮೀನು ಹೊಂದಿರುವುದಾಗಿ ಬೆಳ್ತಂಗಡಿ ಭೂನ್ಯಾಯ ಮಂಡಳಿ ತೀರ್ಪು ನೀಡಿರುತ್ತದೆ. ತೀರ್ಪಿನ ವಿರುದ್ಧ ಭೂಮಾಲೀಕರ ಸಂಸ್ಥೆ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ ರಿಟ್ ಅರ್ಜಿಗಳನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿರುವುದು ತಿಳಿದುಬಂದಿರುತ್ತದೆ. ತದನಂತರದಲ್ಲಿ ಸರ್ಕಾರ ರಿಟ್ ಪಿಟಿಷನ್ ಆದೇಶದ ವಿರುದ್ಧ ರಿವ್ಯೂ ಪಿಟಿಷನ್ ಸಲ್ಲಿಸಿ ಹೈಕೋರ್ಟ್‌ನಲ್ಲಿ ತಿರಸ್ಕೃತವಾದ ಕಾರಣ ಸುರ್ಪೀಂಕೋರ್ಟ್‌ನಲ್ಲಿ ಸ್ಪೇಷಲ್ ಲೀವ್ ಪಿಟಿಷನ್ ದಾಖಲಿಸಿರುತ್ತದೆ.
ಕಂಪನಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯಂತೆ ಹೆಚ್ಚುವರಿ ಜಮೀನನ್ನು ಸರ್ಕಾರದ ವಶಕ್ಕೆ ಒಪ್ಪಿಸಬೇಕಾಗಿರುವುದರಿಂದ ಗೇಣಿದಾರರಲ್ಲದ ತಮ್ಮದೇ ವಲಯದ 53 ಜನರಿಗೆ 537 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಳ್ಳಲಾಗಿರುತ್ತದೆ ಎನ್ನುವುದು ಸರ್ಕಾರದ ವಾದವಾಗಿದ್ದು ಭೂ ನ್ಯಾಯ ಮಂಡಳಿಯಿಂದ ಮಂಜೂರಾಗಿರುವ ಜಮೀನನ್ನು ರದ್ದುಗೊಳಿಸಲು ಪ್ರಯತ್ನ ನಡೆಸಿರುತ್ತದೆ. ಆದರೆ ಮಲೆಕುಡಿಯ ಜನಾಂಗ ವಾಸಿಸುವ ಬಂಜಾರು ಮಲೆಕುಡಿಯು ಸಮುದಾಯ ಕಾಲೋನಿಯ 37 ಕುಟುಂಬಗಳಿಗೆ ಮಂಜೂರಾಗಿರುವ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆದು ಈ ಸಮುದಾಯದ ಜನರ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಶೂನ್ಯವೇಳೆಯಲ್ಲಿ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಇತ್ತೀಚೆಗಷ್ಟೇ ಶೇಖರ್ ಲಾಯಿಲ ಮನವಿ ಸಲ್ಲಿಸಿದ್ದರು.

Related posts

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!