25.5 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜ್ಯ ಸುದ್ದಿ

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್‌: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ

ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ ವಿಧಾನ ಪರಿಷತ್ ನಲ್ಲಿ ಒತ್ತಾಯಿಸಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ವಾಸಿಸುತ್ತಿದ್ದಾರೆ. ಯೆನೆಪೋಯ ಮೊಹಿದ್ದೀನ್ ಕುಂಞಿ ಅಂಡ್ ಕಂಪನಿ ಇವರಿಗೆ ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದಲ್ಲಿ ಒಟ್ಟು 4,028 ಎಕರೆ ಜಮೀನನ್ನು ಹೊಂದಿದ್ದು ಇದರಲ್ಲಿ 368 ಎಕರೆ ಜಮೀನು ಹೆಚ್ಚುವರಿ ಜಮೀನು ಹೊಂದಿರುವುದಾಗಿ ಬೆಳ್ತಂಗಡಿ ಭೂನ್ಯಾಯ ಮಂಡಳಿ ತೀರ್ಪು ನೀಡಿರುತ್ತದೆ. ತೀರ್ಪಿನ ವಿರುದ್ಧ ಭೂಮಾಲೀಕರ ಸಂಸ್ಥೆ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ ರಿಟ್ ಅರ್ಜಿಗಳನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿರುವುದು ತಿಳಿದುಬಂದಿರುತ್ತದೆ. ತದನಂತರದಲ್ಲಿ ಸರ್ಕಾರ ರಿಟ್ ಪಿಟಿಷನ್ ಆದೇಶದ ವಿರುದ್ಧ ರಿವ್ಯೂ ಪಿಟಿಷನ್ ಸಲ್ಲಿಸಿ ಹೈಕೋರ್ಟ್‌ನಲ್ಲಿ ತಿರಸ್ಕೃತವಾದ ಕಾರಣ ಸುರ್ಪೀಂಕೋರ್ಟ್‌ನಲ್ಲಿ ಸ್ಪೇಷಲ್ ಲೀವ್ ಪಿಟಿಷನ್ ದಾಖಲಿಸಿರುತ್ತದೆ.
ಕಂಪನಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯಂತೆ ಹೆಚ್ಚುವರಿ ಜಮೀನನ್ನು ಸರ್ಕಾರದ ವಶಕ್ಕೆ ಒಪ್ಪಿಸಬೇಕಾಗಿರುವುದರಿಂದ ಗೇಣಿದಾರರಲ್ಲದ ತಮ್ಮದೇ ವಲಯದ 53 ಜನರಿಗೆ 537 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಳ್ಳಲಾಗಿರುತ್ತದೆ ಎನ್ನುವುದು ಸರ್ಕಾರದ ವಾದವಾಗಿದ್ದು ಭೂ ನ್ಯಾಯ ಮಂಡಳಿಯಿಂದ ಮಂಜೂರಾಗಿರುವ ಜಮೀನನ್ನು ರದ್ದುಗೊಳಿಸಲು ಪ್ರಯತ್ನ ನಡೆಸಿರುತ್ತದೆ. ಆದರೆ ಮಲೆಕುಡಿಯ ಜನಾಂಗ ವಾಸಿಸುವ ಬಂಜಾರು ಮಲೆಕುಡಿಯು ಸಮುದಾಯ ಕಾಲೋನಿಯ 37 ಕುಟುಂಬಗಳಿಗೆ ಮಂಜೂರಾಗಿರುವ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆದು ಈ ಸಮುದಾಯದ ಜನರ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಶೂನ್ಯವೇಳೆಯಲ್ಲಿ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಇತ್ತೀಚೆಗಷ್ಟೇ ಶೇಖರ್ ಲಾಯಿಲ ಮನವಿ ಸಲ್ಲಿಸಿದ್ದರು.

Related posts

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya
error: Content is protected !!