22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

ಗುಂಡೂರಿ: ಯಾವ ಕೆಲಸವೇ ಸರಿ ಅದರಲ್ಲಿ ಶ್ರದ್ದೆ, ಭಕ್ತಿ, ನಿಷ್ಠೆ ಇದ್ದಲ್ಲಿ ವ್ಯಕ್ತಿ ಗುರಿ ಮುಟ್ಟಿ ಸಮಾಜಕ್ಕೆ ಬೆಳಕಾಗಲು ಸಾಧ್ಯ ಎಂದು ಗುಂಡೂರಿ ಗ್ರಾಮದ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಡಿ.೧೫ರಂದು ನಡೆದ “ಅಭಿನಂದನಾ ಕಾರ್ಯಕ್ರಮ”ದಲ್ಲಿ ಮೂಡಬಿದರೆಯ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯ ಚೇರ್ಮನ್ ಯುವರಾಜ್ ಜೈನ್ ಹೇಳಿದರು.

ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ರವರು ನಮ್ಮ ಪರಿಸರದಲ್ಲಿ ಅದೆಷ್ಟೋ ನಮಗೆ ಕಲಿಸಲಾಗದಂತಹ ಪಾಠಗಳು ಇವೆ.ಅದನ್ನು ನಾವು ಹುಡುಕಬೇಕಷ್ಟೇ.ಉದಾಹರಣೆಗೆ ಈ ಶ್ರೀ ಗುರು ಚೈತನ್ಯ ಸೇವಾಶ್ರಮ.ಇಲ್ಲಿ ವಾಸಿಸುವ ಆಶ್ರಮವಾಸಿಗಳ ಕಳೆದ ತೆರೆಯ ಮೆರೆಯ ಜೀವನ ಕಥೆಗಳು ಯುವ ಪೀಳಿಗೆಗೆ ಜೀವನ ಪಾಠವಿದು.ಇಂತಹ ಮನುಕುಲದ ಸೇವೆಮಾಡಿ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಪ್ರಯತ್ನ ಪಡುವ ಸೇವಾಶ್ರಮದ ಮುಖ್ಯಸ್ಥ ಹೊನ್ನಯ್ಯ ರವರು ಸಮಾಜ ಸೇವೆಗೆ ಉದಾಹರಣೆ ಆಗಿದ್ದಾರೆ ಎಂದು ತಿಳಿಸಿದರು.

ಎಕ್ಸಲೆಂಟ್ ಪಿ.ಯು.ಕಾಲೇಜಿನ ಆರ್ಮಿ ವಿಂಗ್ ಎನ್.ಸಿ.ಸಿಯ ಆಫೀಸರ್ ಲೆ|ಮಹೇಂದ್ರ ಜೈನ್ ಇವರ ಮಾರ್ಗದರ್ಶನದಲ್ಲಿ ತನ್ನ ಎನ್.ಸಿ.ಸಿ ಕೆಡೆಟ್‌ಗಳಿಂದ ಆಶ್ರಮವಾಸಿಗಳಿಗೆ ಮನೋರಂಜನೆ ಕಾರ್ಯಕ್ರಮ ನಡೆಯಿತು. ಎನ್‌ಸಿಸಿಯವರು ಸೇವಾಶ್ರಮಕ್ಕೆ ಅಗತ್ಯ ಸಾಮಾಗ್ರಿಗಳ ಜತೆ ತಿಂಗಳಿಗೆ ಆಗುವಷ್ಟು ಜೀನಸಿ ಸಾಮಾಗ್ರಿಗಳ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ೨೦೨೪ರ ಸಾಲಿನ ದ.ಕ ಜಿಲ್ಲಾ ಮಟ್ಟದ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮವನ್ನು ಸೇವಾಶ್ರಮದ ಹೊನ್ನಯ್ಯ ರವರು ನಿರೂಪಿಸಿದರು. ಕು| ಕ್ಷಿತಿಕ್ಷಾ ಸ್ವಾಗತಿಸಿ ಧನ್ಯವಾದವಿತ್ತರು. ಶ್ರೀಮತಿ ಸೌಜನ್ಯ ಸಜ್ಜನ್ ಜೈನ್, ಶ್ರೀಮತಿ ರೇಣುಕಾ, ರಂಜಿತ್ ನಡ್ತಿಕಲ್ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya
error: Content is protected !!