22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಅಣಿ ದೂರದಲ್ಲಿ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.16 ರಂದು ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ.ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಅಣಿ ಅಂತರದಲ್ಲಿ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.

ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು.ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

Related posts

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya
error: Content is protected !!