September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಅಣಿ ದೂರದಲ್ಲಿ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.16 ರಂದು ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ.ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಅಣಿ ಅಂತರದಲ್ಲಿ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.

ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು.ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

Related posts

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya
error: Content is protected !!