September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya
error: Content is protected !!