25.4 C
ಪುತ್ತೂರು, ಬೆಳ್ತಂಗಡಿ
September 11, 2026
ರಾಜ್ಯ ಸುದ್ದಿ

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್‌: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ

ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ ವಿಧಾನ ಪರಿಷತ್ ನಲ್ಲಿ ಒತ್ತಾಯಿಸಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ವಾಸಿಸುತ್ತಿದ್ದಾರೆ. ಯೆನೆಪೋಯ ಮೊಹಿದ್ದೀನ್ ಕುಂಞಿ ಅಂಡ್ ಕಂಪನಿ ಇವರಿಗೆ ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದಲ್ಲಿ ಒಟ್ಟು 4,028 ಎಕರೆ ಜಮೀನನ್ನು ಹೊಂದಿದ್ದು ಇದರಲ್ಲಿ 368 ಎಕರೆ ಜಮೀನು ಹೆಚ್ಚುವರಿ ಜಮೀನು ಹೊಂದಿರುವುದಾಗಿ ಬೆಳ್ತಂಗಡಿ ಭೂನ್ಯಾಯ ಮಂಡಳಿ ತೀರ್ಪು ನೀಡಿರುತ್ತದೆ. ತೀರ್ಪಿನ ವಿರುದ್ಧ ಭೂಮಾಲೀಕರ ಸಂಸ್ಥೆ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ ರಿಟ್ ಅರ್ಜಿಗಳನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿರುವುದು ತಿಳಿದುಬಂದಿರುತ್ತದೆ. ತದನಂತರದಲ್ಲಿ ಸರ್ಕಾರ ರಿಟ್ ಪಿಟಿಷನ್ ಆದೇಶದ ವಿರುದ್ಧ ರಿವ್ಯೂ ಪಿಟಿಷನ್ ಸಲ್ಲಿಸಿ ಹೈಕೋರ್ಟ್‌ನಲ್ಲಿ ತಿರಸ್ಕೃತವಾದ ಕಾರಣ ಸುರ್ಪೀಂಕೋರ್ಟ್‌ನಲ್ಲಿ ಸ್ಪೇಷಲ್ ಲೀವ್ ಪಿಟಿಷನ್ ದಾಖಲಿಸಿರುತ್ತದೆ.
ಕಂಪನಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯಂತೆ ಹೆಚ್ಚುವರಿ ಜಮೀನನ್ನು ಸರ್ಕಾರದ ವಶಕ್ಕೆ ಒಪ್ಪಿಸಬೇಕಾಗಿರುವುದರಿಂದ ಗೇಣಿದಾರರಲ್ಲದ ತಮ್ಮದೇ ವಲಯದ 53 ಜನರಿಗೆ 537 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಳ್ಳಲಾಗಿರುತ್ತದೆ ಎನ್ನುವುದು ಸರ್ಕಾರದ ವಾದವಾಗಿದ್ದು ಭೂ ನ್ಯಾಯ ಮಂಡಳಿಯಿಂದ ಮಂಜೂರಾಗಿರುವ ಜಮೀನನ್ನು ರದ್ದುಗೊಳಿಸಲು ಪ್ರಯತ್ನ ನಡೆಸಿರುತ್ತದೆ. ಆದರೆ ಮಲೆಕುಡಿಯ ಜನಾಂಗ ವಾಸಿಸುವ ಬಂಜಾರು ಮಲೆಕುಡಿಯು ಸಮುದಾಯ ಕಾಲೋನಿಯ 37 ಕುಟುಂಬಗಳಿಗೆ ಮಂಜೂರಾಗಿರುವ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆದು ಈ ಸಮುದಾಯದ ಜನರ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಶೂನ್ಯವೇಳೆಯಲ್ಲಿ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಇತ್ತೀಚೆಗಷ್ಟೇ ಶೇಖರ್ ಲಾಯಿಲ ಮನವಿ ಸಲ್ಲಿಸಿದ್ದರು.

Related posts

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya
error: Content is protected !!