July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಅಣಿ ದೂರದಲ್ಲಿ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.16 ರಂದು ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ.ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಅಣಿ ಅಂತರದಲ್ಲಿ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.

ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು.ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

Related posts

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya
error: Content is protected !!