September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಅಣಿ ದೂರದಲ್ಲಿ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.16 ರಂದು ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ.ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಅಣಿ ಅಂತರದಲ್ಲಿ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.

ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು.ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

Related posts

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಆಶಾ ಯಂಗ್ ಸ್ಟಾರ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!