23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಅಣಿ ದೂರದಲ್ಲಿ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.16 ರಂದು ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ.ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಅಣಿ ಅಂತರದಲ್ಲಿ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.

ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು.ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

Related posts

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya
error: Content is protected !!