July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!