April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!