22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!