September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya
error: Content is protected !!