23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!