23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya
error: Content is protected !!