37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ : ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಮತ್ತು ಜೂನಿಯರ್ ರೆಡ್ ಕ್ರಾಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವುಗಳ ಜಂಟಿ ಆಶ್ರಯದಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಡಿ.14. ರಂದು ನಡೆಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಹಿರಿಯ ಉಪನ್ಯಾಸಕಿ ಶ್ರೀಮತಿ ಸುವರ್ಣ ಕುಮಾರಿ ಕೆ.ಆರ್. ವಹಿಸಿ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಚೇರ್ ಮ್ಯಾನ್ ಹರಿದಾಸ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಶಿಬಿರದ ಮಹತ್ವವನ್ನು ತಿಳಿಸಿದರು.

ಡಾ. ಮನೀಷ ರವರು ವಿದ್ಯಾರ್ಥಿಗಳಿಗೆ ಆರೋಗ್ಯದ ಕಾಳಜಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಕಾರ್ಯದರ್ಶಿ ಯಶವಂತ ಪಟವರ್ಧನ್, ಡಾ. ಶಿವಾನಂದ ಸ್ವಾಮಿ, ನಿರ್ದೇಶಕರು ಸಿಯೋನ್ ಆಶ್ರಮ ಕಕ್ಕಿಂಜೆ ಉಪಸ್ಥಿತರಿದ್ದರು.

ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇಲ್ಲಿನ ಸದಸ್ಯರುಗಳಾದ ಶ್ರೀಮತಿ ಸುಕನ್ಯ, ಶಿವಕುಮಾರ್ ಹಾಗೂ ಪ್ರಮೋದ್ ಆರ್ ನಾಯಕ್ ಭಾಗವಹಿಸಿದ್ದರು. ಜೂನಿಯರ್ ರೆಡ್ ಕ್ರಾಸ್ ಘಟಕದ ಎಲ್ಲಾ ಸದಸ್ಯರು ಹಾಗೂ ವೈದ್ಯಕೀಯ ತಪಾಸಣೆ ಅಗತ್ಯವುಳ್ಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜಿನ 150, ಪ್ರೌಢಶಾಲೆಯ 50 ಹಾಗೂ ವಿದ್ಯಾರ್ಥಿ ಪೋಷಕರು 04 ಒಟ್ಟು 204 ಮಂದಿ ಶಿಬಿರದ ಪ್ರಯೋಜನವನ್ನು ಪಡೆದರು. ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇವರು ಶಿಬಿರಾರ್ಥಿಗಳಿಗೆ ಉಚಿತ ಔಷಧಿಗಳನ್ನು ಒದಗಿಸಿದರು.

Related posts

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya
error: Content is protected !!