23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ : ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಮತ್ತು ಜೂನಿಯರ್ ರೆಡ್ ಕ್ರಾಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವುಗಳ ಜಂಟಿ ಆಶ್ರಯದಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಡಿ.14. ರಂದು ನಡೆಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಹಿರಿಯ ಉಪನ್ಯಾಸಕಿ ಶ್ರೀಮತಿ ಸುವರ್ಣ ಕುಮಾರಿ ಕೆ.ಆರ್. ವಹಿಸಿ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಚೇರ್ ಮ್ಯಾನ್ ಹರಿದಾಸ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಶಿಬಿರದ ಮಹತ್ವವನ್ನು ತಿಳಿಸಿದರು.

ಡಾ. ಮನೀಷ ರವರು ವಿದ್ಯಾರ್ಥಿಗಳಿಗೆ ಆರೋಗ್ಯದ ಕಾಳಜಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಕಾರ್ಯದರ್ಶಿ ಯಶವಂತ ಪಟವರ್ಧನ್, ಡಾ. ಶಿವಾನಂದ ಸ್ವಾಮಿ, ನಿರ್ದೇಶಕರು ಸಿಯೋನ್ ಆಶ್ರಮ ಕಕ್ಕಿಂಜೆ ಉಪಸ್ಥಿತರಿದ್ದರು.

ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇಲ್ಲಿನ ಸದಸ್ಯರುಗಳಾದ ಶ್ರೀಮತಿ ಸುಕನ್ಯ, ಶಿವಕುಮಾರ್ ಹಾಗೂ ಪ್ರಮೋದ್ ಆರ್ ನಾಯಕ್ ಭಾಗವಹಿಸಿದ್ದರು. ಜೂನಿಯರ್ ರೆಡ್ ಕ್ರಾಸ್ ಘಟಕದ ಎಲ್ಲಾ ಸದಸ್ಯರು ಹಾಗೂ ವೈದ್ಯಕೀಯ ತಪಾಸಣೆ ಅಗತ್ಯವುಳ್ಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜಿನ 150, ಪ್ರೌಢಶಾಲೆಯ 50 ಹಾಗೂ ವಿದ್ಯಾರ್ಥಿ ಪೋಷಕರು 04 ಒಟ್ಟು 204 ಮಂದಿ ಶಿಬಿರದ ಪ್ರಯೋಜನವನ್ನು ಪಡೆದರು. ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇವರು ಶಿಬಿರಾರ್ಥಿಗಳಿಗೆ ಉಚಿತ ಔಷಧಿಗಳನ್ನು ಒದಗಿಸಿದರು.

Related posts

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
error: Content is protected !!