22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ : ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಮತ್ತು ಜೂನಿಯರ್ ರೆಡ್ ಕ್ರಾಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವುಗಳ ಜಂಟಿ ಆಶ್ರಯದಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಡಿ.14. ರಂದು ನಡೆಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಹಿರಿಯ ಉಪನ್ಯಾಸಕಿ ಶ್ರೀಮತಿ ಸುವರ್ಣ ಕುಮಾರಿ ಕೆ.ಆರ್. ವಹಿಸಿ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಚೇರ್ ಮ್ಯಾನ್ ಹರಿದಾಸ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಶಿಬಿರದ ಮಹತ್ವವನ್ನು ತಿಳಿಸಿದರು.

ಡಾ. ಮನೀಷ ರವರು ವಿದ್ಯಾರ್ಥಿಗಳಿಗೆ ಆರೋಗ್ಯದ ಕಾಳಜಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಕಾರ್ಯದರ್ಶಿ ಯಶವಂತ ಪಟವರ್ಧನ್, ಡಾ. ಶಿವಾನಂದ ಸ್ವಾಮಿ, ನಿರ್ದೇಶಕರು ಸಿಯೋನ್ ಆಶ್ರಮ ಕಕ್ಕಿಂಜೆ ಉಪಸ್ಥಿತರಿದ್ದರು.

ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇಲ್ಲಿನ ಸದಸ್ಯರುಗಳಾದ ಶ್ರೀಮತಿ ಸುಕನ್ಯ, ಶಿವಕುಮಾರ್ ಹಾಗೂ ಪ್ರಮೋದ್ ಆರ್ ನಾಯಕ್ ಭಾಗವಹಿಸಿದ್ದರು. ಜೂನಿಯರ್ ರೆಡ್ ಕ್ರಾಸ್ ಘಟಕದ ಎಲ್ಲಾ ಸದಸ್ಯರು ಹಾಗೂ ವೈದ್ಯಕೀಯ ತಪಾಸಣೆ ಅಗತ್ಯವುಳ್ಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜಿನ 150, ಪ್ರೌಢಶಾಲೆಯ 50 ಹಾಗೂ ವಿದ್ಯಾರ್ಥಿ ಪೋಷಕರು 04 ಒಟ್ಟು 204 ಮಂದಿ ಶಿಬಿರದ ಪ್ರಯೋಜನವನ್ನು ಪಡೆದರು. ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇವರು ಶಿಬಿರಾರ್ಥಿಗಳಿಗೆ ಉಚಿತ ಔಷಧಿಗಳನ್ನು ಒದಗಿಸಿದರು.

Related posts

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya
error: Content is protected !!