23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
error: Content is protected !!