September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್ ಸೇವಾ ಟ್ರಸ್ಟ್ ಉಜಿರೆ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಲೇರಿಯನ್ ಡಿಸೋಜಾ ಹಸ್ತಾಂತರ ಮಾಡಿದರು.

ದೇಣಿಗೆ ನೀಡಿ ಮಾತನಾಡಿದ ವಲೇರಿಯನ್ ಡಿಸೋಜ ರವರು,’ ಬದನಾಜೆ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಶಾಲೆಗೆ ಕೊಡುಗೆ ನೀಡಲು ಬಹಳ ಸಂತೋಷವಾಗುತ್ತಿದೆ. ಈ ದೇಣಿಗೆ ಹಣವು ನನ್ನ ಪತ್ನಿಯ ಪಿಂಚಣಿಯ ಭಾಗವಾಗಿದ್ದು, ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಇಲ್ಲಿಗೆ ಈ ಕೊಡುಗೆ ನೀಡುತ್ತಿದ್ದೇವೆ’ ಎಂದರು.


ವಿಶಾಲ್ ಸೇವಾ ಟ್ರಸ್ಟ್ ಉಜಿರೆಯ ಶಿಕ್ಷಕ ದಂಪತಿಗಳಾದ ವಲೇರಿಯನ್ ಡಿಸೋಜ ಮತ್ತು ಫ್ಲೋರಿನ್ ಡಿಸೋಜ ರವರು ತಮ್ಮ ಮಗನ ಹೆಸರಿನಲ್ಲಿ ಸ್ಥಾಪನೆ ಮಾಡಿದ್ದು, ಹಲವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಅನಿಲ್ ಡಿಸೋಜಾ, ಪೋಷಕರು, ಮಾಚಾರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಯಕ್ಷಭಾರತಿ ನೇತೃತ್ವದಲ್ಲಿ ಗೋವಿಂದ ನಮನ, ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!