September 6, 2026
ಧಾರ್ಮಿಕಸಂಘ-ಸಂಸ್ಥೆಗಳು

ಯಕ್ಷಕೂಟ ೫ ನೇ ವಾರ್ಷಿಕೋತ್ಸವ- ಸಾಧಕರಿಗೆ ಸಮ್ಮಾನ

ಪುಂಜಾಲಕಟ್ಟೆ : ಇಲ್ಲಿಯ ಮಧ್ವ ಯಕ್ಷಕೂಟ ಇದರ ಮಧ್ವ ಪ್ಯಾಲೆಸ್ ವಠಾರದಲ್ಲಿ ನಡೆದ ೫ ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಾರಿಂಜದ ಗ್ರಾಮಣಿ ಗಣಪತಿ ಮುಚ್ಚಿನ್ನಾಯ ಉದ್ಘಾಟಿಸಿ, ಮಧ್ವಾಚಾರ್ಯರು ವಿಶ್ರಮಿಸಿದ ಸ್ಥಳವಾದ ಮಧ್ವದಲ್ಲಿ ಯಕ್ಷಗಾನ ಸೇವೆ ನಡೆಸುತ್ತಿರುವುದು ಉತ್ತಮ ಕಾರ್ಯ ಹೇಳಿದರು.

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ ಶೆಣೈ ಅವರು ಮಾತನಾಡಿ, ವೇದಸಾರವನ್ನು ಹೊಂದಿರುವ ಯಕ್ಷಗಾನ ದೇವರಿಗೆ ಪ್ರಿಯವಾಗಿದ್ದು, ಧಾರ್ಮಿಕ ಚಿಂತನೆಯ ಜತೆ ನೈತಿಕ ಮೌಲ್ಯಗಳನ್ನು ತಿಳಿಸುವ ಮಾಧ್ಯಮವಾಗಿದೆ ಎಂದು ಹೇಳಿದರು. ಬಳ್ಳಮಂಜ ಉದ್ಯಮಿ ಜಯಪ್ರಕಾಶ್ ಸಂಪಿಗೆತ್ತಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಮಾಜಿ ಆಡಳಿತ ಮೊಕೇಸ್ತರ ರತ್ನಾಕರ ಶೆಟ್ಟಿ ಮೂಡಾಯೂರು, ಮಧ್ವಕಟ್ಟೆ ಪ್ರಧಾನ ಅರ್ಚಕ ರಾಘವೇಂದ್ರ ಭಟ್,ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಪ್ರಮುಖರಾದ ಬಿ.ಪದ್ಮಶೇಖರ್ ಜೈನ್, ಲಕ್ಷ್ಮೀನಾರಾಯಣ ಶರ್ಮ, ಭವಾನಿ ಶ್ರೀಧರ್, ವೀರೇಂದ್ರ ಅಮೀನ್, ರುಕ್ಮಯ್ಯ ಗೌಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಧಕರಾದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳ್ಳಿ ಪದಕ ಪುರಸ್ಕೃತ ಚಾಲಕ ಜಯಪ್ರಕಾಶ್ ರಾವ್ ಕಾವಳಕಟ್ಟೆ,ಬೆಂಗಳೂರು ಪೊಲೀಸ್ ಅಧಿಕಾರಿ ಶಾಂತಾರಾಮ,ಮಂಗಳೂರು ಅಂಚೆ ಇಲಾಖೆ ಅಧಿಕಾರಿ ಮುಸ್ತಾಕ್ ಹುಸೇನ್,ಯಕ್ಷಗಾನ ಹಿರಿಯ ಅರ್ಥಧಾರಿ ಡಿ.ಪಾತಿಲ ತಿಮ್ಮಪ್ಪ ಶೆಟ್ಟಿ,ಕಾರಿಂಜ ಯಕ್ಷಾವ್ಯಾಸಂ ಸಂಚಾಲಕಿ ಸಾಯಿಸುಮಾ ಎಂ.ನಾವಡ, ಜೀವ ರಕ್ಷಕ ಪ್ರಶಸ್ತಿಯ ಅಂಬ್ಯುಲೆನ್ಸ್ ಚಾಲಕ ಸುನಿಲ್ ಮಿನೇಜಸ್ ಅವರನ್ನು ಸಮ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಭಾಸ್ಕರ ಶೆಟ್ಟಿ ಮಧ್ವ ಸ್ವಾಗತಿಸಿದರು. ಉಪಾಧ್ಯಕ್ಷ ನಾರಾಯಣ ಶೆಟ್ಟಿವಂದಿಸಿದರು. ರತ್ನದೇವ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.ಸಂಜೆ ಶ್ರೀ ಮಧ್ವ ಸಂಕೀರ್ತನಾ ಬಳಗದಿಂದ ಭಜನಾ ಸಂಕೀರ್ತನೆ ರಾತ್ರಿ ಕದಂಬ ಕೌಶಿಕ ಯಕ್ಷಗಾನ ಪ್ರದರ್ಶನಗೊಂಡಿತು.

Related posts

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

Suddi Udaya
error: Content is protected !!