July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.

ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಫನ್ ಸ್ಟ್ಯಾನ್ಲಿ ಡಿಸೋಜ (14) ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಗೋದಳಿಗೆ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದೆ .

ತಕ್ಷಣ ಆತನ ಅಜ್ಜಿ ಹಾಗೂ ದೊಡ್ಡಪ್ಪ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಆವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃತ ಪಟ್ಟಿರುತ್ತಾರೆ. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ .

ಸ್ಥಳಕ್ಕೆ ವೇಣೂರು ಠಾಣಾ ಧಿಕಾರಿ ಶ್ರೀ ಶೈಲಾ , ಮೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಸ್ಥಳ ಕ್ಕೆ ಭೇಟಿ ನೀಡಿದರು,

Related posts

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya
error: Content is protected !!